ಹೌದು ನಡೆದರೆ ಏನಾಗುತ್ತೆ? ಅಂತ ವಿಡಂಬನಾತ್ಮಕವಾಗಿ ವಿವರಿಸುವ ಮಿಂಚೆಯೊಂದು ಬಂದಿತ್ತು,
'ಶೀತಲ ಸಮರ'ದ ಸಮಯದಲ್ಲಿ ಅಮೆರಿಕಾವೆನಾದ್ರು ರಷ್ಯಾದ ಮೇಲೆ ಅಣ್ವಸ್ತ್ರ ಸಿಡಿತಲೆ ಪ್ರಯೋಗಿಸಿದ್ದರೆ, ರಷ್ಯಾಕ್ಕೆ ಅದು ೩ ಸೆಕೆಂಡ್ಗಳಲ್ಲಿ ತಿಳಿಯುತ್ತಿತ್ತು ಮತ್ತು ಅದಕ್ಕೆ ಪ್ರತಿ ಅಸ್ತ್ರ ಪ್ರಯೋಗಿಸಲು ಕೇವಲ ೪೫ ಸೆಕೆಂಡ್ಗಳು ಸಾಕಿತ್ತು.
ಮುಂಬೈ ಮಾರಣ ಹೋಮದ ನಂತರ ಭಾರತ - ಪಾಕಿಸ್ತಾನದ ನಡುವೆ ಯುದ್ದ ಭೀತಿ ಶುರುವಾಗಿದೆಯಲ್ಲ (!), ಯುದ್ಧ ನಡೆದರೆ ಹೀಗಾಗಬಹುದು!!
ಪಾಕಿ ಸೈನ್ಯ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ತೀರ್ಮಾನಿಸುತ್ತದೆ, ಹಾಗೂ ಪ್ರಯೋಗಿಸಿಯೂ ಬಿಡುತ್ತದೆ.(ನೆನಪಿರಲಿ, ಹಾಗೆ ಮಾಡಲು ಅದಕ್ಕೆ ಸರ್ಕಾರದ ಆಜ್ಞೆಗೆ ಕಾಯುವ ಅಗತ್ಯ ಇಲ್ಲ)
ಭಾರತದ ಟೆಕ್ನಾಲಜಿ ಚೆನ್ನಾಗಿರುವುದರಿಂದ ಕೇವಲ ೮ ಸೆಕೆಂಡ್ ಗಳಲ್ಲೇ ಅದಕ್ಕೆ ವಿಷಯ ತಿಳಿದು ಹೋಗುತ್ತದೆ, ಪ್ರತಿ ಅಸ್ತ್ರ ಪ್ರಯೋಗಿಸಲು ಭಾರತಿಯ ಸೈನ್ಯ ನಿರ್ಧಾರ ಮಾಡುತ್ತದೆ.ಆದರೆ ಅವರಿಗೆ ಹಾಗೆ ಮಾಡಲು ಸರ್ಕಾರದ ಆಜ್ಞೆ ಬೇಕಲ್ಲಾ!!
ಸೈನ್ಯವು 'ರಾಷ್ಟ್ರಪತಿ'ಯವರಿಗೆ ಈ ಬಗ್ಗೆ ಪತ್ರವೊಂದನ್ನು ಕಳಿಸುತ್ತದೆ, ಅವರು ಅದನ್ನು 'ಕ್ಯಾಬಿನೆಟ್'ನ ಮುಂದಿಡುತ್ತಾರೆ.ಪ್ರಧಾನಿ ತುರ್ತು ಲೋಕ ಸಭೆ ಅಧಿವೇಶನ ಕರೆಯುತ್ತಾರೆ. ಆದರೆ ಗೊತ್ತಲ್ಲ, ನಮ್ಮ ರಾಜಕೀಯ ನಾಯಕರು 'ಸಭಾತ್ಯಾಗ' ಹಾಗೂ 'ಗದ್ದಲವೆಬ್ಬಿಸುತ್ತಾರೆ'. ಲೋಕ ಸಭೆಯ ಅಧಿವೇಶನ ಅನಿರ್ದಿಷ್ಟ ಅವಧಿಗೆ ಮುಂದೂಡಲ್ಪಡುತ್ತದೆ.
ರಾಷ್ಟ್ರಪತಿಯವರು ತುರ್ತು ನಿರ್ಣಯ ಕೈಗೊಳ್ಳುವಂತೆ ಆದೇಶಿಸುತ್ತಾರೆ.
ಅತ್ತ ಪಾಕಿಗಳು ಹಾರಿಸಿದ ಮಿಸೈಲ್ ತಾಂತ್ರಿಕ ಕಾರಣದಿಂದ ಫೇಲ್ ಆಗಿ ಅವರು ಮತ್ತೊಮ್ಮೆ ಹಾರಿಸುವ ಯತ್ನದಲ್ಲಿರುತ್ತಾರೆ.
ಇತ್ತ ಭಾರತದಲ್ಲಿ ಕೇಂದ್ರ ಸರ್ಕಾರಕ್ಕೆ ಬಾಹ್ಯ ಬೆಂಬಲ ಕೊಟ್ಟಿದ್ದ ಪಕ್ಷವೊಂದು ಬೆಂಬಲ ಹಿಂತೆಗೆದುಕೊಂಡು ಸರ್ಕಾರ ಬಿದ್ದು ಹಂಗಾಮಿ ಸರ್ಕಾರವೊಂದು ನಿರ್ಮಾಣವಾಗುತ್ತದೆ.ಹಂಗಾಮಿ ಪ್ರಧಾನಿಯವರು ಅಣ್ವಸ್ತ್ರ ಪ್ರಯೋಗಿಸಲು ಭದ್ರತಾ ಪಡೆಗಳಿಗೆ ಅನುಮತಿ ನೀಡುತ್ತಾರೆ.ಆದರೆ ಎಲೆಕ್ಷನ್ ಕಮಿಷನ್ ಹಂಗಾಮಿ ಸರ್ಕಾರ ಚುನಾವಣ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದೆ ಎಂದು ಸರ್ವೋಚ್ಹ ನ್ಯಾಯಾಲಯದ ಮೆಟ್ಟಿಲೇರುತ್ತದೆ. ನ್ಯಾಯಾಲಯ ಸರ್ಕಾರದ ಪರ ತೀರ್ಪು ನೀಡುತ್ತದೆ.
ಅಷ್ಟರಲ್ಲಿ ಪಾಕಿಗಳು ಒಂದು ಮಿಸೈಲ್ ಹಾರಿಸಿಯೇ ಬಿಡುತ್ತಾರೆ, ಆದರೆ ಅದು ಇಸ್ಲಾಮಾಬಾದ್ನಲ್ಲೆ ಸರ್ಕಾರಿ ಕಟ್ಟಡದ ಮೇಲೆ ಬೀಳುತ್ತದೆ
ಆದರೆ ಹಠ ಬಿಡದ ಪಾಕಿಗಳು ಮತ್ತೆ ಮತ್ತೆ ಪ್ರಯತ್ನಿಸಿ ವಿಫಲರಾಗಿ ಈ ಬಾರಿ 'Made in China' ಮಿಸೈಲ್ನ ಹಣೆ ಬರಹವೇ ಇಷ್ಟು ಎಂದು, ಅದನ್ನು ಬಿಟ್ಟು 'Made in USA' ಮಿಸೈಲ್ ಬಳಸಲು ತೀರ್ಮಾನಿಸುತ್ತಾರೆ.
ಇತ್ತ ಭಾರತದ ಸೇನೆ ಸರ್ಕಾರದ ಆಜ್ಞೆಗೆ ಕಾದ ೩ ತಿಂಗಳ ಬಳಿಕ, ಸರ್ಕಾರದ ಆದೇಶದ ಮೇರೆಗೆ ಸ್ವ-ನಿರ್ಮಿತ ಮಿಸೈಲ್ ಅನ್ನು ಹಾರಿಸಲು ನಿರ್ಧರಿಸುತ್ತದೆ. ಅಷ್ಟರಲ್ಲಿ ದೇಶಾದ್ಯಂತ ಅಣ್ವಸ್ತ್ರ ಪ್ರಯೋಗದ ವಿರುದ್ದ ಪ್ರತಿಭಟನೆ ನಡೆಯುತ್ತದೆ.
ಈ ನಡುವೆ ಪಾಕಿಗಳು 'ಕಳ್ಳ ಸಾಗಣೆ'ಯಲ್ಲಿ ತಂದ 'Made in USA' ಮಿಸೈಲ್ ಅನ್ನು ಪ್ರಯೋಗಿಸಲು ಹೊರಡುತ್ತಾರೆ, ಅವರಿಗೆ ಅಮೇರಿಕಾದವರು ಬರೆದ ಸಾಫ್ಟವೇರ್ ಅರ್ಥವಾಗುವುದಿಲ್ಲವಾದರು ಹಾರಿಸಿಯೇ ಬಿಡುತ್ತಾರೆ, ಆದರೆ ಆ ಮಿಸೈಲ್ ಭಾರತ ಕಡೆ ನುಗ್ಗುವುದು ಬಿಟ್ಟು ಅದರ ನಿಜವಾದ ಗುರಿಯ ಕಡೆ ನುಗ್ಗುತ್ತದೆ
ಗುರಿ : ರಷ್ಯಾ !!!
ರಷ್ಯಾ, ಪಾಕಿಗಳು ಹಾರಿಸಿದ ಮಿಸೈಲ್ ಅನ್ನು ಕ್ಷಣಾರ್ದದಲ್ಲಿ ಹೊಡೆದುರುಳಿಸಿ, ಪ್ರತಿಯಾಗಿ ತಾವು ಮಿಸೈಲ್ ಹಾರಿಸುತ್ತಾರೆ. ಪಾಕಿಸ್ತಾನ ದ್ವಂಸವಾಗಿ, ಸಹಾಯಕ್ಕಾಗಿ ವಿಶ್ವದ ಮೊರೆಯಿಡುತ್ತದೆ.
ತಕ್ಷಣ ಎಚ್ಚೆತ್ತ ಭಾರತ ಪಾಕಿಗಳಿಗೆ ಕಂಬನಿ ಮಿಡಿದು, ಮಿಲಿಯನ್ ಡಾಲರ್ನಷ್ಟು ಪಾರ್ಲೆ-ಜಿ ಬಿಸ್ಕೆಟ್ಗಳನ್ನೂ ಕಳಿಸಿಕೊಡುತ್ತದೆ.
ಹಾಗೆ ಭಾರತ ಅಣ್ವಸ್ತ್ರವನ್ನು ಬಳಸದೆ ಶಾಂತಿಯಿಂದಲೇ ಯುದ್ಧವನ್ನು ಗೆದ್ದು ಬಿಡುತ್ತದೆ!!!
- ರಾಕೇಶ್ ಶೆಟ್ಟಿ
No comments:
Post a Comment